}

ಚಾರ್ಮಾಡಿ ಘಾಟ್‌ನಲ್ಲಿ ಚಿರತೆ ಪ್ರತ್ಯಕ್ಷ; ಪ್ರವಾಸಿಗರಲ್ಲಿ ಆತಂಕ

suddilive.com
By -
0
Leopard spotted near highway barrier in Charmadi Ghat as tourists capture photos from vehicles

ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಕೆಲಕಾಲ ಪ್ರವಾಸಿಗರಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.


ಧರ್ಮಸ್ಥಳದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕೆಲ ಪ್ರವಾಸಿಗರು ಬೆಳಗ್ಗೆ ಸುಮಾರು 7 ಗಂಟೆ ವೇಳೆಗೆ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ವಾಹನ ನಿಲ್ಲಿಸಿ ಸುತ್ತಮುತ್ತಲಿನ ಪ್ರಕೃತಿ ಸೌಂದರ್ಯ ವೀಕ್ಷಿಸುತ್ತಿದ್ದರು. ಈ ವೇಳೆ ಬೆಟ್ಟ-ಗುಡ್ಡಗಳ ಹಿನ್ನೆಲೆಯೊಂದಿಗೆ ಫೋಟೋ ಹಾಗೂ ಸೆಲ್ಫಿ ತೆಗೆಯುತ್ತಿದ್ದಾಗ ಸಮೀಪದ ತಗ್ಗು ಪ್ರದೇಶದಿಂದ ಪ್ರಾಣಿಯೊಂದು ಚಲಿಸುತ್ತಿರುವ ಶಬ್ದ ಕೇಳಿಬಂದಿದೆ.


ಕುತೂಹಲದಿಂದ ಆ ದಿಕ್ಕಿನಲ್ಲಿ ಗಮನ ಹರಿಸಿದ ಪ್ರವಾಸಿಗರಿಗೆ ಚಿರತೆಯೊಂದು ಕಾಡಿನೊಳಗಿಂದ ರಸ್ತೆಯತ್ತ ಸಾಗುತ್ತಿರುವುದು ಗೋಚರಿಸಿದೆ. ಪ್ರಾಣಿ ಸಮೀಪಕ್ಕೆ ಬರುತ್ತಿರುವುದನ್ನು ಕಂಡ ಕೆಲವರು ಆತಂಕಗೊಂಡು ತಕ್ಷಣ ತಮ್ಮ ವಾಹನಗಳೊಳಗೆ ಸೇರಿದ್ದಾರೆ. ಬಳಿಕ ಹೆದ್ದಾರಿಯ ತಡೆಗೋಡೆ ಸಮೀಪ ಕಾಣಿಸಿಕೊಂಡಿದ್ದ ಚಿರತೆಯ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ತಮ್ಮ ಪ್ರಯಾಣ ಮುಂದುವರಿಸಿದ್ದಾರೆ.


ಚಿರತೆ ಕಾಣಿಸಿಕೊಂಡಿರುವ ಮಾಹಿತಿ ಕೆಲವೇ ಸಮಯದಲ್ಲಿ ಇತರ ವಾಹನ ಸವಾರರಿಗೂ ತಲುಪಿದ್ದು, ಘಾಟ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಎಚ್ಚರಿಕೆಯಿಂದ ಸಂಚರಿಸಿದರೆಂದು ತಿಳಿದುಬಂದಿದೆ.


ಸುಮಾರು 22 ಕಿಲೋಮೀಟರ್ ಉದ್ದದ ಚಾರ್ಮಾಡಿ ಘಾಟ್ ಮಾರ್ಗವು ಮೀಸಲು ಅರಣ್ಯ ಪ್ರದೇಶದ ಮೂಲಕ ಹಾದು ಹೋಗುವುದರಿಂದ ಕಾಡಾನೆ, ಕಾಡುಕೋಣ, ಜಿಂಕೆ, ಸರ್ಪಗಳು ಸೇರಿದಂತೆ ವಿವಿಧ ವನ್ಯಜೀವಿಗಳು ಆಗಾಗ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಕೆಲವು ಸಂದರ್ಭಗಳಲ್ಲಿ ಚಿರತೆಗಳೂ ರಸ್ತೆ ಸಮೀಪ ಕಾಣಿಸಿಕೊಳ್ಳುತ್ತವೆ.


ಮಳೆಗಾಲದ ಸಂದರ್ಭದಲ್ಲಿ ಜಲಪಾತಗಳು ಮತ್ತು ಪ್ರಕೃತಿ ಸೌಂದರ್ಯ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಹಲವರು ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿ ಬೆಟ್ಟಗುಡ್ಡಗಳು ಹಾಗೂ ಕಣಿವೆಗಳ ನೋಟವನ್ನು ಆನಂದಿಸುತ್ತಾ ಫೋಟೋಗಳನ್ನು ತೆಗೆಯುವ ದೃಶ್ಯ ಸಾಮಾನ್ಯವಾಗಿದೆ. ಆದರೆ ಇಂತಹ ಪ್ರದೇಶಗಳು ವನ್ಯಜೀವಿಗಳ ವಾಸಸ್ಥಳವಾಗಿರುವುದರಿಂದ ಅನಗತ್ಯವಾಗಿ ವಾಹನ ನಿಲ್ಲಿಸುವುದು ಅಪಾಯಕಾರಿಯಾಗಬಹುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.


ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಘಾಟ್ ಪ್ರದೇಶದಲ್ಲಿ ನಿಯೋಜಿಸಲಾಗಿದ್ದು, ವನ್ಯಜೀವಿಗಳ ಚಲನವಲನದ ಮೇಲೆ ನಿಗಾ ವಹಿಸಲಾಗುತ್ತಿದೆ. ವನ್ಯಮೃಗಗಳು ರಸ್ತೆ ಪ್ರದೇಶಕ್ಕೆ ಪ್ರವೇಶಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಯಾಣಿಕರು ಹಾಗೂ ಪ್ರವಾಸಿಗರು ಸುರಕ್ಷತೆಯ ದೃಷ್ಟಿಯಿಂದ ವಾಹನಗಳನ್ನು ಅನಗತ್ಯವಾಗಿ ನಿಲ್ಲಿಸದೇ ಎಚ್ಚರಿಕೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default