ಮಂಗಳೂರು, ಜೂ. 6: ಮಂಗಳೂರು ವಕೀಲರ ಸಂಘದ 2026-28ನೇ ಅವಧಿಯ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ನ್ಯಾಯವಾದಿ ಜಗದೀಶ್ ಕೆ. ಶೇಣವ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆಯಲ್ಲಿ ಒಟ್ಟು 1,246 ಮತಗಳು ಚಲಾವಣೆಯಾಗಿದ್ದು, ಅವುಗಳಲ್ಲಿ ಜಗದೀಶ್ ಕೆ. ಶೇಣವ ಅವರು 673 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
ಇದೇ ವೇಳೆ ಸಂಘದ ಉಪಾಧ್ಯಕ್ಷರಾಗಿ ಪ್ರವೀಣ್ ಕುಮಾರ್ ಅದ್ಯಪಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಗೌತಮ್ ಬಿ.ಪಿ., ಜಂಟಿ ಕಾರ್ಯದರ್ಶಿಯಾಗಿ ರವಿ ಕುಮಾರ್ ವಿ. ಹಾಗೂ ಕೋಶಾಧಿಕಾರಿಯಾಗಿ ರೇಖಾ ಕೆ. ಅವರು ಆಯ್ಕೆಯಾಗಿದ್ದಾರೆ.
ಹೊಸ ಪದಾಧಿಕಾರಿಗಳು ವಕೀಲರ ಸಂಘದ ಅಭಿವೃದ್ಧಿ ಮತ್ತು ಸದಸ್ಯರ ಹಿತಾಸಕ್ತಿಗೆ ಆದ್ಯತೆ ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

