}

ಕಾಂಗ್ರೆಸ್ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದ ಖಡಕ್ ಎಚ್ಚರಿಕೆ; ನಾಲ್ವರು ಮುಸ್ಲಿಂ ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

suddilive.com
By -
0

ಬೆಂಗಳೂರು/ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ರಾಜಕೀಯ ಬೆಳವಣಿಗೆಗಳು ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಮುಸ್ಲಿಂ ಸಮುದಾಯ ಕಾಂಗ್ರೆಸ್ ಹೈಕಮಾಂಡ್‌ಗೆ ಮಹತ್ವದ ಸಂದೇಶ ರವಾನಿಸಿದೆ. ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆಗೆ ಸಂಬಂಧಿಸಿದಂತೆ ಸಮುದಾಯದ ನಾಯಕರು ಮತ್ತು ಧರ್ಮಗುರುಗಳು ಒಟ್ಟಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ಅವುಗಳನ್ನು ಈಡೇರಿಸದಿದ್ದರೆ ಮುಂಬರುವ ಚುನಾವಣೆಗಳಲ್ಲಿ ರಾಜಕೀಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಮುಸ್ಲಿಂ ಸಮುದಾಯದ ಧರ್ಮಗುರುಗಳು, ಮೌಲ್ವಿಗಳು ಹಾಗೂ ವಿವಿಧ ರಾಜಕೀಯ ಮುಖಂಡರು ಭಾಗವಹಿಸಿ ಕಾಂಗ್ರೆಸ್ ಸರ್ಕಾರದಲ್ಲಿ ಸಮುದಾಯಕ್ಕೆ ಸಮರ್ಪಕ ಪ್ರಾತಿನಿಧ್ಯ ದೊರಕಬೇಕು ಎಂಬ ಒತ್ತಾಯ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮುಸ್ಲಿಂ ಸಮುದಾಯದ ಮತಗಳು ಪ್ರಮುಖ ಪಾತ್ರ ವಹಿಸಿವೆ. ಆದ್ದರಿಂದ ಸಮುದಾಯದ ನಿರೀಕ್ಷೆಗಳಿಗೆ ತಕ್ಕಂತೆ ಸಚಿವ ಸಂಪುಟದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸಬೇಕೆಂದು ಅವರು ಆಗ್ರಹಿಸಿದ್ದಾರೆ. ವರದಿ ಸುದ್ದಿ ಲೈವ್ ಡಾಟ್ ಕಾಮ್ 


ಪ್ರಸ್ತುತ ವಿಧಾನಸಭಾಧ್ಯಕ್ಷರಾಗಿರುವ ಯು.ಟಿ. ಖಾದರ್ ಅವರಿಗೆ ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಯಾಗಿ ಉನ್ನತ ಸ್ಥಾನ ದೊರೆತಿದ್ದರೂ, ಅದರಿಂದ ಮಾತ್ರ ಸಮುದಾಯದ ರಾಜಕೀಯ ಆಶಯಗಳು ಈಡೇರುವುದಿಲ್ಲ ಎಂದು ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಸಮುದಾಯದ ಇನ್ನೂ ನಾಲ್ವರು ಹಿರಿಯ ನಾಯಕರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಮುಂದೆ ಬೇಡಿಕೆ ಇಡಲಾಗಿದೆ.


ಈ ಕುರಿತು ಮಾತನಾಡಿದ ಸಮುದಾಯದ ಮುಖಂಡರು, “ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ಏಕಪಕ್ಷೀಯ ಬೆಂಬಲದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಪಕ್ಷವು ಸಮುದಾಯದ ವಿಶ್ವಾಸಕ್ಕೆ ತಕ್ಕ ಪ್ರತಿಫಲ ನೀಡುವ ಜವಾಬ್ದಾರಿ ಹೊಂದಿದೆ. ಮುಂಬರುವ ಲೋಕಸಭೆ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣವೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ. ವರದಿ ಸುದ್ದಿ ಲೈವ್ ಡಾಟ್ ಕಾಮ್ 


ಅಲ್ಲದೆ, “ನಮ್ಮ ಬೇಡಿಕೆಯನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಮುದಾಯದ ಶಕ್ತಿ ಏನೆಂಬುದನ್ನು ತೋರಿಸಬೇಕಾಗುತ್ತದೆ. ಇದು ಕೇವಲ ರಾಜಕೀಯ ಬೇಡಿಕೆಯಲ್ಲ, ಸಮುದಾಯದ ನ್ಯಾಯಯುತ ಹಕ್ಕಿನ ಪ್ರಶ್ನೆಯಾಗಿದೆ” ಎಂದು ಮೌಲ್ವಿಗಳು ಮತ್ತು ಮುಖಂಡರು ಎಚ್ಚರಿಕೆ ನೀಡಿದ್ದಾರೆ.


ಮುಸ್ಲಿಂ ಸಮುದಾಯದ ಪರವಾಗಿ ಸಚಿವ ಸ್ಥಾನಕ್ಕಾಗಿ ಜಮೀರ್ ಅಹ್ಮದ್ ಖಾನ್, ಎನ್.ಎ. ಹ್ಯಾರಿಸ್, ತನ್ವೀರ್ ಸೇಠ್ ಹಾಗೂ ಸಲೀಂ ಅಹ್ಮದ್ ಅವರ ಹೆಸರುಗಳನ್ನು ಪ್ರಮುಖವಾಗಿ ಮುಂದಿರಿಸಲಾಗಿದೆ. ಈ ನಾಲ್ವರು ಹಿರಿಯ ಶಾಸಕರು ಹಾಗೂ ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಮೂಲಕ ಸಮುದಾಯಕ್ಕೆ ಸಮರ್ಪಕ ಪ್ರಾತಿನಿಧ್ಯ ನೀಡಬೇಕು ಎಂಬುದು ಒತ್ತಾಯವಾಗಿದೆ. ವರದಿ ಸುದ್ದಿ ಲೈವ್ ಡಾಟ್ ಕಾಮ್ 


ಇದೀಗ ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಜೋರಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಾವ ರೀತಿಯ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಎರಡನೇ ಹಂತದ ಸಚಿವ ಸಂಪುಟ ರಚನೆಯಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದನ್ನು ರಾಜಕೀಯ ವಲಯ ಮಾತ್ರವಲ್ಲದೆ ಮುಸ್ಲಿಂ ಸಮುದಾಯವೂ ಕಾತರದಿಂದ ಎದುರು ನೋಡುತ್ತಿದೆ.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default