}

ಕರಾವಳಿ-ಮಲೆನಾಡಿನ ಅಡಿಕೆ ಬೆಳೆಗಾರರಿಗೆ ಕೇಂದ್ರದ ಭರವಸೆ; ರೋಗ ನಿಯಂತ್ರಣಕ್ಕೆ ವೈಜ್ಞಾನಿಕ ಕ್ರಮ

suddilive.com
By -
0

 


ದಕ್ಷಿಣ ಕನ್ನಡ ಸೇರಿದಂತೆ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಎಲೆಚುಕ್ಕಿ, ಹಳದಿ ಎಲೆ ಮತ್ತು ಕೊಳೆರೋಗಗಳ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದ್ದಾರೆ.


ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಅಡಿಕೆ ಬೆಳೆಗಾರರ ಸಮಸ್ಯೆಯನ್ನು ಪ್ರಸ್ತಾಪಿಸಿದ್ದರು. ಇದಕ್ಕೆ ಸಚಿವರು ಲಿಖಿತ ಉತ್ತರ ನೀಡಿದ್ದು, ರೋಗ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ವಿವರ ನೀಡಿದ್ದಾರೆ.


ಕಾಸರಗೋಡಿನ ಕೇಂದ್ರ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ (ICAR-CPCRI) ವತಿಯಿಂದ ಎಲೆಚುಕ್ಕಿ ಮತ್ತು ಹಳದಿ ಎಲೆ ರೋಗಗಳ ನಿಯಂತ್ರಣ ಕುರಿತು ನಿರಂತರ ಸಂಶೋಧನೆ ನಡೆಸಲಾಗುತ್ತಿದೆ. ಇದರ ಭಾಗವಾಗಿ ಸಮಗ್ರ ರೋಗ ನಿರ್ವಹಣಾ ಪದ್ಧತಿಯನ್ನು ಅಭಿವೃದ್ಧಿಪಡಿಸಲಾಗಿದ್ದು, ಶಿರಸಿ, ಸಿದ್ದಾಪುರ, ಬೆಳ್ತಂಗಡಿ ಮತ್ತು ಸುಳ್ಯ ಸೇರಿದಂತೆ ಏಳು ಕ್ಲಸ್ಟರ್‌ಗಳಲ್ಲಿ ಪ್ರಾತ್ಯಕ್ಷಿಕೆಯಾಗಿ ಜಾರಿಗೊಳಿಸಲಾಗಿದೆ.


ಈ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿದ ಪ್ರದೇಶಗಳಲ್ಲಿ ರೋಗದ ತೀವ್ರತೆ ಗಣನೀಯವಾಗಿ ಕಡಿಮೆಯಾಗಿರುವುದು ಕಂಡುಬಂದಿದೆ ಎಂದು ಸಚಿವರು ತಿಳಿಸಿದ್ದಾರೆ.


ಇದೇ ವೇಳೆ, ಅಡಿಕೆಯಲ್ಲಿ ಕಾಣಿಸಿಕೊಳ್ಳುವ ಕೊಳೆರೋಗ ನಿಯಂತ್ರಣಕ್ಕೆ ಮುಂಗಾರು ಪೂರ್ವ ಹಾಗೂ ಮುಂಗಾರು ಅವಧಿಯಲ್ಲಿ ಬಳಸಬೇಕಾದ ಸೂಕ್ತ ಶಿಲೀಂಧ್ರನಾಶಕಗಳನ್ನೂ ಅಭಿವೃದ್ಧಿಪಡಿಸಲಾಗಿದೆ. ಶಿಫಾರಸು ಮಾಡಲಾದ ಕ್ರಮಗಳನ್ನು ಅನುಸರಿಸಿದ ತೋಟಗಳಲ್ಲಿ ಬೆಳೆ ಇಳುವರಿಯಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.


ರಾಷ್ಟ್ರೀಯ ಅಡಿಕೆ ವೈಜ್ಞಾನಿಕ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಮಿಷನ್ (MIDH) ಹಾಗೂ ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯದ ಸಹಯೋಗದಲ್ಲಿ ರೈತರಲ್ಲಿ ಜಾಗೃತಿ ಮೂಡಿಸುವ ಮತ್ತು ಸಮುದಾಯ ಆಧಾರಿತ ರೋಗ ನಿರ್ವಹಣಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.


ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಲೆಚುಕ್ಕಿ ರೋಗದ ನಿಯಂತ್ರಣಕ್ಕೆ ರೈತರು ಒಗ್ಗಟ್ಟಿನಿಂದ ಶಿಫಾರಸು ಮಾಡಿರುವ ವೈಜ್ಞಾನಿಕ ಕ್ರಮಗಳನ್ನು ಅನುಸರಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.


ಮುಂದಿನ ದಿನಗಳಲ್ಲೂ ICAR-CPCRI ಸಂಸ್ಥೆ ಅಡಿಕೆ ಬೆಳೆಗಳ ಕುರಿತು ಸಂಶೋಧನೆ ಮುಂದುವರಿಸಲಿದ್ದು, ರೈತರಿಗೆ ಅಗತ್ಯವಿರುವ ತಾಂತ್ರಿಕ ಮಾರ್ಗದರ್ಶನ ಮತ್ತು ಬೆಂಬಲವನ್ನು ಒದಗಿಸಲಿದೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಸ್ಪಷ್ಟಪಡಿಸಿದ್ದಾರೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default